ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.04.  ಹೆಡ್ ಕಾನ್ಸ್‌ಟೇಬಲ್ ನೋರ್ವರು  ಹೃದಯಘಾತದಿಂದಾಗಿ ಮೃತಪಟ್ಟ ಘಟನೆ ಬೆಂಗಳೂರುನಲ್ಲಿ ವರದಿಯಾಗಿದೆ.

ಮೃತರನ್ನು ಹೆಬ್ಬಾಳ ಠಾಣೆಯ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ 7 ಗಂಟೆಯ ಹೊತ್ತಿನಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು, ಇದೇ ವೇಳೆ ಪೊಲೀಸರು ಹೊಯ್ಸಳ ವಾಹನದಲ್ಲೇ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಿಸಿದದ್ದರು.

ಹೆಡ್ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟರು, ವಿರೂಪಾಕ್ಷಪ್ಪ ಮೂಲತಃ ಬಿಜಾಪುರ ಜಿಲ್ಲೆಯಯವರಾಗಿದ್ದು, 2008 ರಲ್ಲಿ ಪೊಲೀಸ್ ಇಲಾಖೆ ಆಯ್ಕೆಯಾಗಿದ್ದರು ಎಂದು ತಿಳಿದುಬಂದಿದೆ. ಮೃತ ವಿರೂಪಾಕ್ಷ ಕಳೆದ ಹಲವು ವರ್ಷಗಳಿಂದ ದೇವನಹಳ್ಳಿ ಠಾಣೆ, ಏರ್ಪೋಟ್ ಪೊಲೀಸ್ ಠಾಣೆ ಸೇರಿದಂತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಕರ್ತವ್ಯದ ಜೊತೆಗೆ ಹಲವು ಸಾಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದರು. ಜತೆಗೆ ಕೊರೋನಾ ಸಂದರ್ಭದಲ್ಲಿ ಬಡವರು ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ದೇವನಹಳ್ಳಿ ಸುತ್ತಾಮುತ್ತ ಜನಮನ್ನಣೆ ಗಳಿಸಿ ಇತ್ತೀಚೆಗಷ್ಟೆ ಇಲಾಖೆಯ ಬಡ್ತಿ ಮೇರೆಗೆ ದೇವನಹಳ್ಳಿ ಠಾಣೆಯಿಂದ ಹೆಬ್ಬಾಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group