ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                        

(ನ್ಯೂಸ್ ಕಡಬ) newskadaba.com ಕಡಬ, ಡಿ. 05. ಕಾಮಗಾರಿಗಳ ಶಿಲಾನ್ಯಾಸಕ್ಕೆ ಆಗಮಿಸಿದ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ ಗ್ರಾಮಸ್ಥರು ಮನವಿ ಕೊಟ್ಟಾಗ ಸಚಿವರ ಪ್ರತಿಕ್ರಿಯೆ ಕಂಡು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬಲ್ಯ ಗ್ರಾಮದಲ್ಲಿ ಸಂಭವಿಸಿದೆ.

ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ. ಸರಕಾರ ಹಣ ಕೊಡಬೇಕು. ನೀವು ಮನವಿ ಕೊಡಿ, ಬಿಡಿ ಎಂದು ಶಾಸಕ ಅಂಗಾರ ಹೇಳಿದ್ದಾರೆ. ಇದರಿಂದ ಜನರು ಕೋಪಗೊಂಡು ಸ್ಥಳದಿಂದ ತೆರಳಿ ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಲ್ಯ ಗ್ರಾಮದ ಬಹುತೇಕ ಕಡೆಗಳಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.

error: Content is protected !!

Join the Group

Join WhatsApp Group