ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಲಾರ, ಜ. 06. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಮನೆಯವರು ಈತನಿಗೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡುವಂತೆ ಬುದ್ದಿವಾದ ಹೇಳಿದ್ದರಿಂದ ಮನನೊಂದು ಬಾಲಕ ವಿಷ ಸೇವಿಸಿದ್ದು, ಕೂಡಲೇ ಉದಯ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಧ್ಯರಾತ್ರಿ ಮನೆಗೆ ನುಗ್ಗಿ ಅರಣ್ಯಾಧಿಕಾರಿಗಳಿಂದ ದಾಂಧಲೆ ಆರೋಪ ➤ ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

error: Content is protected !!
Scroll to Top