ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ದ.ಕ ಜಿಲ್ಲೆಯಲ್ಲಿ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಆರೋಪಿಸಿದ್ದಾರೆ.

Also Read  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ.!

error: Content is protected !!
Scroll to Top