ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!       

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.08. ಗೃಹ ಸಚಿವಾಲಯದಿಂದ ದೇಶವ್ಯಾಪಿ ನಿಷೇಧಕ್ಕೊಳಗಾದ ಬೆನ್ನಲ್ಲೇ ಟಿ.ಆರ್‌.ಎಫ್‌ ಉಗ್ರ ಸಂಘಟನೆಯು, ಕಾಶ್ಮೀರಿ ಪಂಡಿತರ ವಿರುದ್ಧ ಹಿಟ್‌ಲಿಸ್ಟ್‌ ಬಿಡುಗಡೆ ಮಾಡುವ ಮೂಲಕ ಭಯೋತ್ಪಾದಕ ದಾಳಿಯ ಎಚ್ಚರಿಕೆ ನೀಡಿದೆ.

ಟಿ.ಆರ್‌.ಎಫ್‌ ಜಮ್ಮು ಕಾಶ್ಮೀರದ ಜನರನ್ನು ಭಾರತ ಸರ್ಕಾರದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆ ಪ್ರಚೋದನೆ ನೀಡುತ್ತದೆ ಹಾಗೂ ಉಗ್ರರ ಒಳನುಸುಳುವಿಕೆಗೆ ಮತ್ತು ಪಾಕಿಸ್ತಾನದಿಂದ ಜಮ್ಮು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಮಾದಕ ವಸ್ತುಗಳ ಸಾಗಣೆಗೆ ಪ್ರೇರಣೆ ನೀಡುತ್ತದೆ. ಈ ಹಿಂದೆ ಕೂಡ ಅದು ಕಾಶ್ಮೀರಿ ಪಂಡಿತರಿಗೆ ಬೆದರಿಕೆ ಹಾಕಿತ್ತು. ಲಷ್ಕರ್‌ ಎ ತೊಯ್ಬಾದ ಸೋದರ ಸಂಘಟನೆ ಇದಾಗಿದೆ ಎನ್ನಲಾಗಿದೆ.

Also Read  ಕುಖ್ಯಾತ ಸರಗಳ್ಳರು ಅರೆಸ್ಟ್ ➤ 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ

 

error: Content is protected !!
Scroll to Top