ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!!

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.08. ರಂಗಸ್ಥಳದಲ್ಲೇ ಕುಸಿದುಬಿದ್ದು ಕಲಾವಿದಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.

ಮೃತರನ್ನು ನಂಜಯ್ಯ(46) ಎಂದು ಗುರುತಿಸಲಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು. ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು ಸೇರಿಕೊಂಡು ಪೌರಾಣಿಕ ನಾಟಕಯೊಂದನ್ನು ಆಯೋಜಿಸಿದ್ದರು ಎನ್ನಲಾಗಿದೆ.

error: Content is protected !!
Scroll to Top