ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಮನೆಯ ಮುಂದೆ ನಿಲ್ಲಿಸಿದ್ದ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರಿ​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ವರದಿಯಾಗಿದೆ.

ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

error: Content is protected !!

Join the Group

Join WhatsApp Group