ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ.08. ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಮಕ್ಕಳಿಗೆ ಗಾಯವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆ ಮಾಜಿಕೆರೆ ಬಳಿ ವರದಿಯಾಗಿದೆ.

ಜಗಳೂರು ಪಟ್ಟಣದ ಎನ್.ಎಂ.ಕೆ ಖಾಸಗಿ ಶಾಲೆಯ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಟ್ಟು 6 ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಕ್ಕಳನ್ನು ಮತ್ತು ಚಾಲಕನನ್ನು ಕೂಡಲೇ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Also Read  ಭಾರತೀಯ ಅಂಚೆ ಇಲಾಖೆ : "ಪ್ರೀತಿಯ ಬಾಪು, ನೀವು ಅಮರ" ➤ ಅಂಚೆ ಇಲಾಖೆ ಪತ್ರ ಬರಹ ಸ್ಪರ್ಧೆ

error: Content is protected !!
Scroll to Top