ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!!

(ನ್ಯೂಸ್ ಕಡಬ) newskadaba.com ತೆಲಂಗಾಣ, ಜ.09.  ಗುಮ್ಮಡಿಲ ಕೈಗಾರಿಕಾ ಪ್ರದೇಶದ ಮೈಲನ್ ಕೆಮಿಕಲ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ಎಂದು ವರದಿ ತಿಳಿಸಿದೆ.

ಮೃತರನ್ನು ಪಶ್ಚಿಮ ಬಂಗಾಳದ ಪರಿತೋಷ್ ಮೆಹ್ತಾ (46), ಬಿಹಾರದ ರಂಜಿತ್ ಕುಮಾರ್ (27) ಮತ್ತು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸಹಾಯಕ ವ್ಯವಸ್ಥಾಪಕ ಲೋಕೇಶ್ವರ್ ರಾವ್ (38) ಎಂದು ಗುರುತಿಸಲಾಗಿದೆ.

ಘಟಕದಲ್ಲಿದ್ದ ಇತರ ಕಾರ್ಮಿಕರು ಬೆಂಕಿಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮೂವರನ್ನು ಹೈದರಾಬಾದ್‌ನ ಸೋಮಾಜಿಗುಡಾದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಸಿಐ ತಿಳಿಸಿದ್ದಾರೆ.

error: Content is protected !!
Scroll to Top