ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                   

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಗೆ ಪಟ್ಟು ಹಿಡಿದ ಹಿನ್ನೆಲೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಮಾಜಿ ಶಾಸಕ ಮೊಯ್ದೀನ್ ಬಾವ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ

 

 

 

error: Content is protected !!
Scroll to Top