ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಯುವ ದೇಹದಾರ್ಢ್ಯಪಟುವೊಬ್ಬರ ಮೃತದೇಹವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಬಳಿಯ ಹೀರಂಡಹಳ್ಳಿ ಬಳಿ ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಎಂದು ಗುರುತಿಸಲಾಗಿದೆ.

ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಾನೂ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group