ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ. 11:   ರೋಹಿಣಿ ಥಿಯೇಟರ್‌ಗೆ ‘ತುನಿವು’ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ, ಸಿನಿಮಾ ಬಿಡುಗಡೆ ಸಂಭ್ರಮಾಚರಣೆಗೆಂದು ಹತ್ತಿದ್ದ ಟ್ಯಾಂಕರ್ ಲಾರಿಯೊಂದರ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರದಂದು ಚೆನ್ನೈ ನಲ್ಲಿ ವರದಿಯಾಗಿದೆ.

ಮೃತ ಯುವಕನನ್ನು ಭರತ್ ಕುಮಾರ್(19) ಎಂದು ಗುರುತಿಸಲಾಗಿದೆ. ಇತರರೊಂದಿಗೆ ಆತ ಪೂನಮಲ್ಲಿ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಯೊಂದರ ಮೇಲೆ ಹತ್ತಿದ್ದಾನೆ ಎಂದು ತಿಳಿದುಬಂದಿದೆ.

ತುನಿಪು ನಟ ಅಜಿತ್ ಕುಮಾರ್ ಅಭಿನಯದ ಚಿತ್ರವಾಗಿದೆ. ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ಅಂಗವಾಗಿ, ಯುವಕರ ಗುಂಪೊಂದು ನೀರಿನ ಟ್ಯಾಂಕರ್ ಅನ್ನು ನಿಲ್ಲಿಸಿ ಅದರ ಮೇಲೆ ಹತ್ತಿ ನೃತ್ಯ ಮಾಡುತ್ತಿದ್ದಾಗ ಭರತ್ ಕುಮಾರ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಟೆಗಳ ನಂತರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group