ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು 

(ನ್ಯೂಸ್ ಕಡಬ) newskadaba.com ಹಾಸನ, ಜ. 12. ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಸಕಲೇಶಪುರ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ರವರನ್ನು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವುದು, ಅವರಿಗೆ ನೀಡಿದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸುವಲ್ಲಿ ವಿಫಲತೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

Scroll to Top