ಚೆಕ್ ಬೌನ್ಸ್ ಪ್ರಕರಣ ➤ ‘ಮಠ’ ಖ್ಯಾತಿಯ ಗುರುಪ್ರಸಾದ್ ಅಂದರ್!

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 13.  ನಿರ್ದೇಶಕ ಗುರುಪ್ರಸಾದ್​ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದೆ. ವಂಚನೆ ಹಾಗು ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿದೆ.

Also Read  ಬೆಳ್ಳಾರೆ: ಕಾಳುಮೆಣಸು ಕಳ್ಳತನ ➤ ನಾಲ್ವರು ಆರೋಪಿಗಳು ಅರೆಸ್ಟ್

error: Content is protected !!
Scroll to Top