ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.!

Theft, crime, Robbery

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.14. ಎರಡು ಮನೆಗಳಿಗೆ ನುಗ್ಗಿದ ಕಳ್ಳರು ಸುಮಾರು 40 ಪವನ್ ಚಿನ್ನಾಭರಣ ಮತ್ತು 40 ಸಾವಿರ ರೂ. ನಗದು ಕಳವು ಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ವಿನಲ್ಲಿ ನಡೆದಿದೆ.

ಬ್ಯಾಂಕ್ ಸಿಬ್ಬಂದಿ ವಾಸುದೇವ ರಾವ್ ಮನೆಗೆ ನುಗ್ಗಿ 35 ಪವನ್ ಚಿನ್ನಾಭರಣ ಮತ್ತು 15 ಸಾವಿರ ರೂ. ನಗದು ಹಾಗೂ ಮೋಹನ್ ದಾಸ್ ಎಂಬವರ ಮನೆಯಿಂದ ಮೂರೂವರೆ ಪವನ್ ಚಿನ್ನಾಭರಣ ಮತ್ತು 25 ಸಾವಿರ ರೂ. ನಗದು ಕಳವು ಮಾಡಲಾಗಿದೆ.

ವಾಸುದೇವ ರವರ ಮನೆಯ ಕಿಟಿಕಿಯ ಸರಳು ಮುರಿದು ಒಳನುಗ್ಗಿ ಕೃತ್ಯ ನಡೆಸಲಾಗಿದೆ ಮೋಹನ್ ದಾಸ್ ರವರ ಮನೆಯ ಮುಂಭಾಗಿಲ ಬಾಗಿಲು ಮುರಿದು ಮುರಿದು ಕಳವು ಮಾಡಲಾಗಿದೆ. ಕುಂಬಳೆ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಕೊರೋನ ಸೋಂಕಿಗೆ ಭಾರತೀಯ ಮೂಲದ ಯುಕೆ ವೈದ್ಯ ಬಲಿ

 

 

error: Content is protected !!
Scroll to Top