ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ನಗರವನ್ನೇ ಬೆಚ್ಚಿ ಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರು. ಇದೀಗ ನಿರಂತರ ಸರಿ ಸುಮಾರು ಎರಡು ತಿಂಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಗರದ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು. ಇದರಲ್ಲಿ ಆರೋಪಿ ಮುಹಮ್ಮದ್ ಶಾರೀಕ್ ಮತ್ತು ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗಾಯಗೊಂಡಿದ್ದರು. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮುಹಮ್ಮದ್ ಶಾರೀಕ್‌ನನ್ನು ಕೆಲವು ಸಮಯದ ಹಿಂದೆ ಎನ್‌ಐಎ ಬೆಂಗಳೂರಿಗೆ ಕರೆದೊಯ್ದಿತ್ತು. ಪುರುಷೋತ್ತಮ ಪೂಜಾರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು.

 

error: Content is protected !!

Join the Group

Join WhatsApp Group