ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು



(ನ್ಯೂಸ್ ಕಡಬ)newskadaba.com ನವದೆಹಲಿ, ಜ.15. ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.








‘ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ ಅವರ ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು ಮತ್ತು ಪ್ರಯಾಣದ ಮಧ್ಯದಲ್ಲಿ ಅವರ ಸ್ಥಿತಿ ಹದಗೆಟ್ಟಿತು’ ಎಂದು ವಿಮಾನ ನಿಲ್ದಾಣ ಪ್ರಭಾರಿ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಹೇಳಿದ್ದಾರೆ. ವೈದ್ಯರ ಪ್ರಕಾರ, ಅವರು ಈಗಾಗಲೇ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ಶರ್ಮಾ ಹೇಳಿದ್ದಾರೆ.






error: Content is protected !!
Scroll to Top