ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಅವಿಭಜಿತ ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ದೀಪ ಬೆಳಗಿಸುವ ಮೂಲಕ ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಬು ಮುಗೇರ ಅದ್ಧೂರಿ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆ ಆರಂಭವಾಯಿತು. ಇದೀಗ ಕಡಬದ ರಾಜಬೀದಿಯಲ್ಲಿ ಪರಿಸರದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಬೃಹತ್ ಶೋಭಾಯಾತ್ರೆಯು ಕಡಬದ ರಾಜಬೀದಿಯಲ್ಲಿ ಸಾಗುತ್ತಿದ್ದು, ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

error: Content is protected !!

Join the Group

Join WhatsApp Group