ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಕಡಬ, ಜ.17. ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳ 28ರ ಮೊದಲು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು  ಸಚಿವ ಎಸ್.ಅಂಗಾರ ಅವರು ಸುಬ್ರಹ್ಮಣ್ಯದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮ ನಡೆಯಲಿದೆ. ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

 

 

error: Content is protected !!
Scroll to Top