ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್​ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.

 

 

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ ಇರುವುದನ್ನು ಗಮನಿಸಿ ಮನೆಯ ಹೊರಗಿನಿಂದ ಬೀಗ ಹಾಕಿದ್ದಾರೆ ಎನ್ನಲಾಗಿದೆ.

Also Read  ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

error: Content is protected !!
Scroll to Top