ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು

(ನ್ಯೂಸ್ ಕಡಬ)newskadab.com  ಮಡಿಕೇರಿ, ಜ.18. ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್‌ ಹಾಗೂ ತಾರಾ ದಂಪತಿಯ ಪುತ್ರ ರಕ್ಷಿತ್‌ ಅವರ ಪತ್ನಿ ಕಾವ್ಯಾ (23) ಮೃತಪಟ್ಟವರು ಎನ್ನಲಾಗಿದೆ.

ರಕ್ಷಿತ್‌ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯಾ ಯಾವುದೇ ಪ್ರತಿಕ್ರಿಯೆ ಇಲ್ಲದೆ ಬಿದ್ದಿದ್ದರೆನ್ನಲಾಗಿದೆ. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 4 ವರ್ಷಗಳ ಹಿಂದೆ ರಕ್ಷಿತ್‌ ಹಾಗೂ ಕಾವ್ಯಾ ಪ್ರೇಮ ವಿವಾಹವಾಗಿದ್ದರು ಮತ್ತು ಮಕ್ಕಳಿರಲಿಲ್ಲ ಎಂದು ತಿಳಿದುಬಂದಿದೆ. ಮೃತಳ ತಂದೆ ಆರ್ಜಿ ಗ್ರಾ.ಪಂ. ವ್ಯಾಪ್ತಿಯ ಕಿರುಮಕ್ಕಿ ಗ್ರಾಮದ ನಿವಾಸಿ ವಂಸತ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group