ಉಪ್ಪಿನಂಗಡಿ: ಹಾಡಹಗಲೇ ಮನೆ ವರಾಂಡದಲ್ಲಿದ್ದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ ➤ ಆತಂಕದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, . 19.  ಹಾಡಹಗಲೇ ಪ್ರತ್ಯಕ್ಷಗೊಂಡ ಚಿರತೆಯೊಂದು ಗಣೇಶ್ ಎಂಬವರ ಮನೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ತಣ್ಣೀರುಪಂಥ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.

ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ರವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯ ಊರಿಡೀ ಹಬ್ಬುತ್ತಿದ್ದಂತೆಯೇ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.

Also Read  ಕಡಬ: ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್ ಶುಭಾರಂಭ

error: Content is protected !!
Scroll to Top