ಎಟಿಎಂ ಕಳವು ಪ್ರಕರಣ ➤ಬಾರ್ ಸಪ್ಲೈಯರ್ ಅಂದರ್

ನ್ಯೂಸ್ ಕಡಬ) newskadaba.com, ಬೆಂಗಳೂರು,ಜ.19. ಎಟಿಎಂ ಕಳವು ಪ್ರಯತ್ನ ಪ್ರಕರಣದ ಖತರ್ನಾಕ್ ಖದೀಮನೊಬ್ಬನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ರಂಗನಾಥಪುರದ ಕರಿಚಿತ್ತಪ್ಪ(21) ಬಂಧಿತ ಆರೋಪಿಯಾಗಿದ್ದಾನೆ.

ಈತ ಮಾಗಡಿ ಮುಖ್ಯರಸ್ತೆ ಕಾಮಾಕ್ಷಿಪಾಳ್ಯ ಜಯಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂನ್ನು ಹೊಡೆದು ಕಳವು ಮಾಡಲು ಪ್ರಯತ್ನಿಸಿದ ಬಗ್ಗೆ ಜಗ್ಗೇಶ್ ನೀಡಿದ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್ ಮತ್ತವರ ಸಿಬ್ಬಂದಿ ಪ್ರಕರಣದ ತನಿಖೆ ಕೈಗೊಂಡಿದ್ದರು. ಪ್ರಕರಣದ ಸಂಬಂಧ ಎಟಿಎಂನಲ್ಲಿ ಸೆರೆಯಾಗಿದ್ದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ ತುಮಕೂರಿನ ಮರಳೂರು ಸರ್ಕಲ್‌ನಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಕಾಮಾಕ್ಷಿಪಾಳ್ಯದ ನವರತ್ನ ಬಾರ್ ನಲ್ಲಿ ಸಪ್ಲೈಯರ್ ಕೆಲಸ ಮಾಡುತ್ತಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದರು.

error: Content is protected !!

Join the Group

Join WhatsApp Group