➤ನೇಣಿಗೆ ಶರಣಾದ ಮೂವರು ಸಹೋದರಿಯರು

(ನ್ಯೂಸ್ ಕಡಬ) newskadaba.com, ತುಮಕೂರು, ಜ. 20. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಕನಹಾಲ್ ತಾಂಡ್ಯ ಬಳಿಯ ಒಂದು ಮನೆಯಲ್ಲಿ ಮೂವರು  ಹೆಣ್ಣು ಮಕ್ಕಳು ವಾಸವಿದ್ದರು. ಆದರೆ ಈಗ ಆ ಮನೆಯಲ್ಲಿ ದುರಂತವೊಂದು ಸಂಭವಿಸಿದೆ. ಈ ಘಟನೆಯಿಂದ ತಾಂಡ್ಯದ ಜನರೇ ಬೆಚ್ಚಿಬಿದ್ದಿದ್ದಾರೆ. ಮೂವರು ಅನಾಥ ಸಹೋದರಿಯರು ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ.

ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರು ಎಂದು ತಿಳಿದುಬಂದಿದೆ. ಹಲವು ವರ್ಷಗಳ ಹಿಂದೆಯೇ ಈ ಮೂವರುಹೆಣ್ಣು ಮಕ್ಕಳ ಪೋಷಕರು ಮೃತಪಟ್ಟಿದ್ದರು. ಅಂದಿನಿಂದ ಅಜ್ಜಿ ಜೊತೆಯಲ್ಲಿ ಮೂವರು ಸಹೋದರಿಯರು ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!

Join the Group

Join WhatsApp Group