ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.20. ಕೆಲ ದಿನಗಳ ಹಿಂದೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜ ಸಮೀಪದಲ್ಲಿ ಬೆಳಕಿಗೆ ಬಂದಿದೆ.  ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ(70) ಶವವಾಗಿ ಪತ್ತೆಯಾದ ವ್ಯಕ್ತಿ. ಎಂದಿನಂತೆ ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಬಳಿಕ ಅವರು ಮನೆಗೆ ಬಾರದೇ ಇದ್ದುದರಿಂದ ಮನೆಯವರು ಹುಟುಕಾಟ ವಿವಿಧೆಡೆ ಹುಡುಕಾಟ ನಡೆಸಿದ್ದರು.

ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿದರು. ಸುಬ್ರಹ್ಮಣ್ಯ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಸ ಬಿಟ್ಟು ಮನೆಗೆ ಬರುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

 

error: Content is protected !!
Scroll to Top