ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ.

ರೈಲ್ವೆ ನಿಲ್ದಾಣ ತಲುಪುವ ಮೊದಲು ಕಾಲುವೆಯ ಮೇಲಿನ ಸೇತುವೆಯನ್ನು ಸಮೀಪಿಸುತ್ತಿದ್ದಂತೇ, ರೈಲಿನಿಂದ ಶವವನ್ನು ಎಸೆದಿದ್ದಾರೆ. ಶವ ಕಾಲುವೆಗೆ ಬೀಳದೇ, ಅದು ರೈಲ್ವೆ ಹಳಿಗಳ ಬಳಿ ಬಿದ್ದಿದೆ. ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಬಾಲಕಿಯ ಗುರುತು ಪತ್ತೆ ಹಚ್ಚಿದ ಪೊಲೀಸರು ಸುನೀತಾಳನ್ನು ಪತ್ತೆ ಹಚ್ಚಿ ವಿಚಾರಣೆಗೆ ಕರೆದೊಯ್ದರು. ವಿಚಾರಣೆ ವೇಳೆ ಆಕೆ ತನ್ನ ಮಗಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಶರ್ಮಾ ತಿಳಿಸಿದ್ದಾರೆ.

Also Read  ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

 

 

error: Content is protected !!
Scroll to Top