ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.21. ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ.

ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.

Also Read  ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

 

error: Content is protected !!