ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು.


ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.k1wbapps.karnataka.gov.in ಅಥವಾ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48,1ನೇ ಮಹಡಿ & 2ನೇ ಮಹಡಿ ,ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು – 560022 ಅಥವಾ ದೂರವಾಣಿ ಸಂಖ್ಯೆ : 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ತಿಳಿಸಿದ್ದಾರೆ.

Scroll to Top