ಮೈಸೂರು: ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಆದೇಶ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಮೈಸೂರು, ಜ.23. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಹೆಲಿಪ್ಯಾಡ್‍ನಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.


ಆ ತಾಲ್ಲೂಕಿನಲ್ಲಿ ಚಿರತೆ ದಾಳಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಬಾಲಕನ ಮೇಲೆ ದಾಳಿ ನಡೆಸಿದೆ. ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ದೇಹ ದೊರೆತಿದೆ. ಚಿರತೆಯು ಈ ಹಿಂದೆಯೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ಬಾರಿ ದಾಳಿ ಮಾಡಿದೆ. ಮತ್ತೆ ಹೆಚ್ಚಿನ ಬಲಿ ಕೊಡಲಾಗುವುದಿಲ್ಲ. ಅದೇ ತಾಲ್ಲೂಕಿನಲ್ಲಿ ಇತ್ತೀಚೆಗೆ ಚಿರತೆಯೊಂದನ್ನು ಸೆರೆ ಹಿಡಿಯಲಾಗಿತ್ತು. ಈಗ ದಾಳಿ ಮಾಡಿರುವ ಚಿರತೆಯನ್ನೂ ಆದಷ್ಟು ಬೇಗ ಸೆರೆ ಹಿಡಿಯಲಾಗುವುದು ಎಂದು ತಿಳಿಸಿದರು.

Also Read  ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ಘಟನೆ

 

error: Content is protected !!
Scroll to Top