ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

(ನ್ಯೂಸ್ ಕಡಬ)newskadaba.com  ಮುಂಬೈ, ಜ.24. ಕೆಲವರು ತಮಗೆ ತಾವೇ ವಿಚಿತ್ರವಾಗಿ ಅಂತ್ಯ ಹೇಳಿಕೊಳ್ಳುತ್ತಾರೆ. ಅಂಥದ್ದೇ ಒಂದು ಪ್ರಕರಣ ಇಲ್ಲೊಂದು ಕಡೆ ನಡೆದಿದ್ದು, ಯುವಕನೊಬ್ಬ ತನಗೇ ತಾನೇ ವಾಟ್ಸ್​ ಆಪ್​ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿಕೊಂಡಿದ್ದ. ವಿಚಿತ್ರವೆಂದರೆ ಆತ ಹಾಗೆ ಸ್ಟೇಟಸ್ ಹಾಕಿಕೊಂಡ ಕೆಲವೇ ಗಂಟೆಗಳಲ್ಲಿ ಆತನ ಶವ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿತ್ತು ಎನ್ನಲಾಗಿದೆ.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನೇರಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್‌ಇನ ರಿಷಿಕೇಶ್ ದಿಲಿಪ್​ ಖೊಡ್ಪೆ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜತೆ ನೆಲೆಸಿದ್ದ ಈತ ಮೂಡ್ ಆಫ್​ ಅಂತ ವಾಟ್ಸ್​  ಆಪ್​ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ.

ಮರುದಿನ ತನಗೆ ತಾನೇ ಶ್ರದ್ಧಾಂಜಲಿ ಹೇಳಿಕೊಳ್ಳವಂತೆ ಭಾವನಾತ್ಮಕವಾಗಿ ಸ್ಟೇಟಸ್ ಹಾಕಿಕೊಂಡಿದ್ದ ಈತ, ನಂತರ ತನ್ನ ಕಸಿನ್ ಪ್ರದೀಪ್ ಖೊಡ್ಪೆಗೆ ಕರೆ ಮಾಡಿ, ನಿನ್ನನ್ನು ಬಿಟ್ಟು ಹೋಗುವುದಾಗಿ ಹೇಳಿದ್ದ. ಎಲ್ಲಿದ್ದಿಯಾ ಎಂದು ಪ್ರದೀಪ್ ಕೇಳಿದಾಗ ಗೋರಖ್ ಬಾಬಾ ಫಾರ್ಮ್​ನಲ್ಲಿದ್ದೇನೆ ಎಂದಿದ್ದ. ಕೂಡಲೇ ಪ್ರದೀಪ್ ಅಲ್ಲಿಗೆ ಹೋದರೆ ಅಲ್ಲಿನ ಮರವೊಂದರಲ್ಲಿ ರಿಷಿಕೇಶ್ ನೇಣು ಹಾಕಿಕೊಂಡಿದ್ದ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

error: Content is protected !!

Join the Group

Join WhatsApp Group