ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು

Accident

(ನ್ಯೂಸ್ ಕಡಬ)newskadaba.com ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ.


ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.


ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರಸಾದ್, ಶಿಜು, ಅಮಲ್, ಸಚಿನ್ ಮತ್ತು ಸುಮೋದ್ ಎಂದು ಗುರುತಿಸಲಾಗಿದೆ.

error: Content is protected !!

Join the Group

Join WhatsApp Group