➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 25. ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನಪ್ಪಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಾಲ್ಗುಡಿ ಎಕ್ಸ್ ಪ್ರೆಸ್ ರೈಲಿನಡಿಗೆ ಸಿಲುಕಿ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ.

ಮೃತರಲ್ಲಿ ಒಬ್ಬರನ್ನು ಶಶಿ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ಕಾಚಿಗುಡ ಎಕ್ಸ್ ಪ್ರೆಸ್ ನಿಂದ ಇಳಿದು ಮೈಸೂರಿಂದ ಬೆಂಗಳೂರಿಗೆ ಹೊರಟಿದ್ದ ಮಾಲ್ಗುಡಿ ಎಕ್ಸ್ ಪ್ರೆಸ್ ರೈಲು ಹತ್ತಲು ಮುಂದಾಗುತ್ತಾರೆ. ಈ ವೇಳೆ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಅಸುನೀಗಿದ್ದಾರೆ. ಸಾವನ್ನಪ್ಪಿರುವ ವೃದ್ಧೆಯ ಮುಖ ಗುರುತು ಸಿಗದಷ್ಟು ಜಜ್ಜಿ ಹೋಗಿದೆ.

Also Read  ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top