ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.25. ಗುಜರಾತ್ ಮೂಲದ ಬಸ್ಸೊಂದು ಮಲೈ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಉರುಳಿಬಿದ್ದ ಘಟನೆ ವರದಿಯಾಗಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ 50 ಪ್ರವಾಸಿಗರ ಪೈಕಿ ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಕ್ಕೆಂದು ಬಂದಿದ್ದ ಗುಜರಾತ್ ಮೂಲದ ಬಸ್ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ.

ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ

 

error: Content is protected !!
Scroll to Top