ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಡಗು, ಜ.25. ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ವರದಿಯಾಗಿದೆ. ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್‌ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ ಯಾಕೆ ಬಂದಿದ್ದೀರಿ ಎಂದು ಮೋಟಾರ್ ಸೈಕಲ್ ನ ಕೀಯನ್ನು ತೆಗೆದುಕೊಂಡು ಅವ್ಯಾಚ ಪದಗಳಿಂದ ಬೈದು ಹಲ್ಲೆ ನಡೆಸಿರುವುದಲ್ಲದೆ ಕೊಲೆ ಬೆದರಿಗೆ ಒಡ್ಡಿರುವುದಾಗಿ ಪಿಡಿಓ ಅನಿಲ್ ಕುಮಾರ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Also Read  ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾರ್ಥಿಗಳು ➤ ಕಾಲೇಜು ಆಡಳಿತ ಮಂಡಳಿಯಿಂದ ಅಭಿನಂದನೆ

error: Content is protected !!
Scroll to Top