ಪ್ರಜೆಗಳ ಕಲ್ಯಾಣಕ್ಕಾಗಿ ತಾರತಮ್ಯ ಮುಕ್ತ ಆಡಳಿತ ➤ ಸಚಿವ ಬಿ.ಸಿ. ನಾಗೇಶ್‌           

(ನ್ಯೂಸ್ ಕಡಬ)newskadaba.com  ಮಡಿಕೇರಿ, ಜ.27. ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಗತಿಯನ್ನು ಸಾಧಿಸಿ, ಗೌರವಯುತ ಜೀವನ ನಡೆಸಬೇಕು. ಯಾರೊಬ್ಬರಿಗೂ ತಾರತಮ್ಯ ಮಾಡಬಾರದು ಎನ್ನುವುದು ನಮ್ಮ ಸಂವಿಧಾನದ ಮೂಲ ಆಶಯವಾಗಿದ್ದು, ಇದಕ್ಕೆ ಅನುಗುಣವಾಗಿ ಸರ್ವರ ಕಲ್ಯಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್‌ ಕೆ.ಎಸ್‌. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು ಎಂದು ತಿಳಿದುಬಂದಿದೆ.

 

Scroll to Top