ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.

ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು ಎನ್ನಲಾಗಿದೆ. ವರುಣ್‌ ಅವರು ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಸೂಕ್ತ ಸುರಕ್ಷತೆ ವಹಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ ವಿರುದ್ಧ ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.

Scroll to Top