ಫೆ.10 ರಂದು ಪೌರಕಾರ್ಮಿಕರ ಮಕ್ಕಳಿಗೆ ‘ಪ್ರತಿಭಾ ಪುರಸ್ಕಾರ’, ಟ್ಯಾಬ್ ವಿತರಣೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಜ.30. ಜಿಲ್ಲಾಡಳಿತ ವತಿಯಿಂದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಷೇಧ ಕುರಿತಂತೆ ಅರಿವು ಮತ್ತು ತರಬೇತಿ ಕಾರ್ಯಕ್ರಮವನ್ನು ಇದೇ ಫೆ.10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭೆಯಲ್ಲಿ ಜರುಗಿದ ಪೌರ ಕಾರ್ಮಿಕರ ಪ್ರತಿಭಾ ಪುರಸ್ಕಾರ ಸಮಾರಂಭದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕಾರ್ಯಕ್ರಮ ದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಆಯೋಗದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಅಚ್ಚುಕಟ್ಟುಗಿ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

Also Read  MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ

error: Content is protected !!
Scroll to Top