ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ ➤ 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗಳ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಯನಗರ, ಬಸನಗೌಡ, ಯಶವಂತಪುರ, ಚಿಕ್ಕಪೇಟೆ ಸೇರಿದಂತೆ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಅಂಗಡಿಗಳ ಮಾಲೀಕರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top