(ನ್ಯೂಸ್ ಕಡಬ) newskadaba.com,ನವದೆಹಲಿ.ಜ.31. ಸಂಸತ್ತಿನ ಎರಡು ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದಾರೆ. ಇದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಚಾಲನೆ ನೀಡಲಾಯಿತು. ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಭಾರಿ ಬಿಕ್ಕಟ್ಟಿನಿಂದ ಬಳಲುತ್ತಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ, ಭಾರತ ಉತ್ತಮ ಸ್ಥಾನದಲ್ಲಿದೆ. ಇಂದು ವಿಶ್ವದ ಹಲವು ದೇಶಗಳು ಭಾರತದ ನೆರವು ಕೇಳುತ್ತಿವೆ ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದರಿಂದ ಹಿಡಿದು ತ್ರಿವಳಿ ತಲಾಖ್ ರದ್ದುಗೊಳಿಸುವವರೆಗೆ, ನನ್ನ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಮುರ್ಮು ಹೇಳಿದ್ದಾರೆ.
ಇಂದು ಭಾರತದ ಆತ್ಮಸ್ಥೈರ್ಯ ಅತ್ಯುನ್ನತ ಮಟ್ಟದಲ್ಲಿದ್ದು, ಜಗ