ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಂಬಲಪಾಡಿಯ ಫ್ಯಾಮಿಲಿ ಸಭಾಭವನದ ಹಿಂಬದಿಯಲ್ಲಿರುವ ಸಿಪಿಸಿ ಲೇಔಟ್ ನಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿಯೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ತೆಗೆದುಕೊಂಡಿದ್ದಾರೆ.


ಮೂಡುಬೆಳ್ಳೆ ನಿವಾಸಿ ಅಶೋಕ ಬಂಧಿತ ಆರೋಪಿ. ನಾಗಬನದಲ್ಲಿ ಶ್ರೀಗಂಧದ ಮರಕಡಿಯುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಉಡುಪಿ ವಲಯದ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಕೇಶವ ಪೂಜಾರಿ ಎಂ. ನೇತೃತ್ವದಲ್ಲಿ ಗಸ್ತು ಅರಣ್ಯ ಪಾಲಕರಾದ ಹೆಚ್. ದೇವರಾಜ್ ಪಾಣ, ಅಭಿಲಾಷ್ ಎಸ್. ಬಿ ಮತ್ತು ವಿತೇಶ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿಯಿಂದ ಸುಮಾರು 43 ಕೆಜಿ ಹಸಿ ಶ್ರೀಗಂಧವನ್ನು ದಸ್ತಗಿರಿ ಮಾಡಲಾಗಿದೆ. ಕುಂದಾಪುರದ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯಂ ನಾಯಕ್ ಮತ್ತು ಸಹಾಯಕ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಂತೆ ಉಡುಪಿ ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ಅಗಲ ಕಿರಿದಾದ ಕಡಬ - ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ

 

error: Content is protected !!
Scroll to Top