ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.01. ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ ಗೋವಿಂದರಾಜು(19) ಕೊಲೆಯಾದ ಯುವಕ.

ಗೋವಿಂದರಾಜು ತನ್ನದೇ ಕುಟುಂಬದ ಮತ್ತಿಕೆರೆಯ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನೆನ್ನಲಾಗಿದೆ. ಪ್ರೀತಿಗೆ ಯುವತಿಯ ಪೋಷಕರು, ಸಂಬಂಧಿಕರಿಂದ ವಿರೋಧವಿತ್ತೆನ್ನಲಾಗಿದೆ. ಇತ್ತೀಚೆಗೆ ಗೋವಿಂದರಾಜು ಯುವತಿಯ ಮೊಬೈಲ್ ಫೋನ್ ಗೆ ಮೆಸೇಜೊಂದನನ್ನು ಕಳುಹಿಸಿದ್ದರೆನ್ನಲಾಗಿದೆ. ಇದನ್ನು ಗಮನಿಸಿದ ಯುವತಿಯ ಸಂಬಂಧಿಕ ಅನಿಲ್ ಕುಮಾರ್, ಭರತ್ ಎಂಬವರು ಇನ್ನಿಬ್ಬರೊಂದಿಗೆ ಸೇರಿ ಗೋವಿಂದರಾಜುನನ್ನು‌ ಮತ್ತಿಕೆರೆಯಲ್ಲಿ ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ ಬೆಂಗಳೂರಿನ ರಾಜ್ ಗೋಪಾಲ್ ನಗರದ ಅಂಧರಹಳ್ಳಿ ಎಂಬಲ್ಲಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಚಾರ್ಮಾಡಿ ಘಾಟ್ ಗೆ ತಂದು ಪ್ರಪಾತಕ್ಕೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group