ಮಂಗಳೂರು ಪಾಲಿಕೆ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ  

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.02. ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ. ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಅಕ್ಷಯ್ ಶ್ರೀಧರ್ ಅವರು ಕಳೆದೆರಡು ವರ್ಷಗಳಿಂದ ಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

Scroll to Top