ಬಟ್ಟೆ ತೊಳೆಯಲು ಕಾಲುವೆಗಿಳಿದ ಇಬ್ಬರು ಜಲಸಮಾಧಿ

Death, deadbody, Waterfall

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.02. ಕೃಷ್ಣಾ ಮೇಲ್ದಂಡೆ ಯೋಜನೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಓರ್ವ ಬಾಲಕ ಸೇರಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ರಸೂಲ್ ಮಾಲದಾರ (26) ಹಾಗೂ ಸಮೀವುಲ್ಲಾ ಗೊಳಸಂಗಿ (10) ಮೃತ ದುರ್ದೈವಿಗಳು.


ಮುದ್ದೇಬಿಹಾಳ ಪಟ್ಟಣದ ಚಿಕನ್‌ ಸೆಂಟರ್‌ವೊಂದರಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಬಟ್ಟೆ ತೊಳೆಯಲೆಂದು ಹಡಗಲೇರಿ ಬಳಿಯ ನಾಲೆಗೆ ಹೋಗಿದ್ದರು. ಇದು ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಯಾಗಿದ್ದು, ನೀರು ತುಂಬಿ ಹರಿಯುತ್ತಿತ್ತು. ಬಟ್ಟೆ ತೊಳೆಯಲು ರಸೂಲ್ ಮತ್ತು ಸಮೀವುಲ್ಲಾ ತುಂಬಿ ಹರಿಯುತ್ತಿದ್ದ ನಾಲೆಗೆ ಇಳಿದಿದ್ದಾರೆ. ಈ ವೇಳೆ ಇಬ್ಬರೂ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group