ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.03. ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಯುವತಿ ಗಾಯಗೊಂಡ ಘಟನೆ ಪೆರಿಯದಲ್ಲಿ ನಡೆದಿದೆ.

ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತರು. ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ (26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ವೈಶಾಖ್ ಪೆರಿಯದ ಇಂಟರ್ ಲಾಕ್ ಸಂಸ್ಥೆ ನಡೆಸುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು ಎಂದು ವರದಿ ತಿಳಿಸಿದೆ.

Also Read  ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..!

 

error: Content is protected !!
Scroll to Top