ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾದ, ಫೆ.04. ರಿಯಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರಾವಳಿ ಮಂಗಳೂರಿನ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.‌

ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯಲ್ಲಿ ಇವರು ತೆರಳುವಾಗ ಒಂಟೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಕೀಲ್ ಅವರು ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತಿಳಿದುಬಂದಿದೆ ಎನ್ನಲಾಗಿದೆ.

Also Read  ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ

 

error: Content is protected !!
Scroll to Top