ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

(ನ್ಯೂಸ್ ಕಡಬ)newskadaba.com ಉಜಿರೆ, ಫೆ.04. “ಕನ್ನಡವು ಶ್ರೇಷ್ಠ ಭಾಷೆಯಾಗಿದ್ದು, ಇದನ್ನು ಉಳಿಸಿ,ಬೆಳೆಸಿ, ಪಸರಿಸಿ,ಇದರ ಕಂಪನ್ನು ಇನ್ನಷ್ಟು ಎತ್ತರಕ್ಕೆ ಏರಿಸಲು ಸಮ್ಮೇಳನವು ಸಹಕಾರಿಯಾಗಲಿ. ಪ್ರತಿ ವ್ಯಕ್ತಿಗೂ ಕನ್ನಡದ ಪರಿಚಯವನ್ನು, ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹವನ್ನು ನೀಡುತ್ತಿರುವ ಸಾಹಿತ್ಯ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ” ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.


ಉಜಿರೆಯಲ್ಲಿ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಯಶಸ್ವಿಯಾಗಿ ಜರಗಲಿದ್ದು,ಉತ್ತಮ ಆಶಯವನ್ನು ಹೊಂದಿದೆ. ಜಿಲ್ಲಾಡಳಿತದಿಂದ ಸಮ್ಮೇಳನಕ್ಕೆ ಬೇಕಾಗುವ ಅಗತ್ಯ ಸಹಕಾರ ನೀಡಲಾಗುವುದು” ಎಂದು ಹೇಳಿದರು.

error: Content is protected !!

Join the Group

Join WhatsApp Group