➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ

(ನ್ಯೂಸ್ ಕಡಬ) newskadaba.com, ಚೆನ್ನೈ ಫೆ.4. ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿ ನೆಲೆಸಿದ್ದ 78 ವರ್ಷ ವಾಣಿ ಜೈರಾಮ್ ಅವರು ವಿವಿಧ ಭಾರತೀಯ ಭಾಷೆಗಳಲ್ಲಿ ಸುಮಾರು 10,000 ಹಾಡುಗಳನ್ನು ಹಾಡಿದ್ದಾರೆ.

ವೆಲ್ಲೂರಿನವರಾದ ಅವರು ತಮಿಳು, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಗುಜರಾತಿ, ಹರ್ಯಾನ್ವಿ, ಅಸ್ಸಾಮಿ, ತುಳು ಮತ್ತು ಬಂಗಾಳಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡಿದ್ದಾರೆ. ಸಾವಿರಾರು ಭಕ್ತಿಗೀತೆಗಳನ್ನು ಹಾಡಿದ್ದಾರೆ. ಅಲ್ಲದೆ ಪ್ರಪಂಚದಾದ್ಯಂತ ಹಲವಾರು ಸಂಗೀತ ಕಚೇರಿಗಳನ್ನು ಸಹ ನಡೆಸಿಕೊಟ್ಟಿದ್ದಾರೆ.

error: Content is protected !!

Join the Group

Join WhatsApp Group