ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.06. ಕೃಷಿ ಕಾರ್ಯಕ್ಕಾಗಿ ಹಾಗೂ ನೀರಾವರಿ ಅನುಕೂಲಕ್ಕಾಗಿ ಜಮೀನಿನಲ್ಲಿ‌ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ವಿಜಯನಗರದಲ್ಲಿ ವರದಿಯಾಗಿದೆ.

ನಾಗರಾಜ ಎಂಬುವರ ಕೃಷಿ ಹೊಂಡದಲ್ಲಿ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಅಭಿಶೇಕ್ (15), ಜಿತೇಂದ್ರ (10) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಪತಹಸೀಲ್ದಾರ ಶಂಕ್ರಪ್ಪ ಹಾಗೂ ಎಎಸ್ ಐ ಕರಿವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೃಷಿ ಹೊಂಡ ಬಳಿ ಚಪ್ಪಲಿಗಳು ಇದ್ದು, ಅದರೊಳಗೆ ದೇಹ ಇರುವ ಬಗ್ಗೆ ಪರಿಶೀಲನೆ ಮಾಡಿದಾಗ ಮೃತ ದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

Also Read  ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ

 

error: Content is protected !!
Scroll to Top