ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಮೇಲೆಯೇ ಹೃದಯಾಘಾತವಾಗಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಮೃತರನ್ನು ನಾರಾಯಣಪ್ಪ (60) ಎಂದು ಗುರುತಿಸಲಾಗಿದೆ.  ತೆಂಗಿನ ಕಾಯಿ ಕೀಳುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ  ಎಂದು ವರದಿ ತಿಳಿಸಿದೆ.

ಮರದ ಮೇಲೆ ಇದ್ದ ಅವರನ್ನು ಹಲವು ಬಾರಿ ಕರೆದರೂ ಪ್ರತಿಕ್ರಿಯಿಸದ ಕಾರಣ ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಮೃತದೇಹ ಕೆಳಗಿಳಿಸಿದ್ದಾರೆ.

 

 

 

error: Content is protected !!
Scroll to Top