(ನ್ಯೂಸ್ ಕಡಬ)newskadaba.com ಕಾರವಾರ,ಫೆ.07. ದೇವಸ್ಥಾನದಲ್ಲಿ ಕಳ್ಳತನ ಮಾಡಿ ಬಳಿಕ ತಪ್ಪಿಸಿಕೊಳ್ಳಲು ಹೋಗಿ ಅಪಘಾತವಾಗಿ ಕಳ್ಳರು ಸಿಕ್ಕಿಬಿದ್ದಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಎಕ್ಕೆಗೋಳಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆಎಂದು ವರದಿಯಾಗಿದೆ.
.
ಶಿವಮೊಗ್ಗ ಮೂಲದ ಇರ್ಫಾನ್ ಹಾಗೂ ಆರೀಫ್ ಬಂಧನಕ್ಕೊಳಗಾದ ಕಳ್ಳರು. ದೇವಸ್ಥಾನದ ಬೀಗ ಮುರಿದು 55 ಸಾವಿರ ರೂ. ಹಣ ಮತ್ತು ದೇವರ ಪರಿಕರಗಳನ್ನು ಕಳ್ಳರು ಕಳ್ಳತನ ಮಾಡಿದರು . ಜನರು ಅಟ್ಟಿಸಿಕೊಂಡು ಬಂದಾಗ ತಪ್ಪಿಸಿಕೊಂಡು ಹೋಗಿದ್ದ ಕಳ್ಳರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಕಳ್ಳರು ಸಿಕ್ಕಿಬಿದ್ದಿದ್ದಾರೆ. ಭಟ್ಕಳ ಪೊಲೀಸರಿಗೆ ಮಾಲು ಸಮೇತ ಸ್ಥಳೀಯರು ವಶಕ್ಕೆ ನೀಡಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.





